Advertisement
ವೆದರ್ ಮಿರರ್

ಕೇರಳಕ್ಕೆ ಮುಂಗಾರು ಪ್ರವೇಶ | ಎರಡು ದಿನದಲ್ಲಿ ದುರ್ಬಲ ಮುಂಗಾರು ರಾಜ್ಯಕ್ಕೆ ಪ್ರವೇಶ |

Share

ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ  ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ. ಈ ನಡುವೆ ಮುಂದಿನ ಐದು ದಿನಗಳ ಕಾಲ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರ ತಡವಾಗಿ ಮುಂಗಾರು ಮಾರುತಗಳು ಕೇರಳಕ್ಕೆ ಪ್ರವೇಶ ಪಡೆದುಕೊಂಡಿದೆ. ಗುರುವಾರ ರಾಜ್ಯದ ಶೇ.95ರಷ್ಟು  ಪ್ರದೇಶಗಳಲ್ಲಿ ಮಳೆಯಾಗಿದೆ. 48 ತಾಸುಗಳಲ್ಲಿ ರಾಜ್ಯಕ್ಕೆ ಮಾನ್ಸೂನ್ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪರ್ ಜಾಯ್ ಚಂಡಮಾರುತದ ಹೊಡೆತದಿಂದ ಕರ್ನಾಟಕದ ಕರಾವಳಿ ಭಾಗ ಪಾರಾಗಿದೆ. ಬಿಪರ್ ಜಾಯ್ ಸೈಕ್ಲೋನ್ ಕರಾವಳಿಯ ನೈರುತ್ಯ ಭಾಗದಿಂದ 900 ಕಿಮೀ ದೂರದಲ್ಲಿದ್ದು, ರಾಜ್ಯದ ಕರಾವಳಿ ಸಮೀಪಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ಗಂಟೆಗೆ 35-45 ಕಿಲೋ ಮೀಟರ್​ನಿಂದ  55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಅಂದಾಜಿದೆ.
ಹವಾಮಾನ ತಜ್ಞರು ಮತ್ತು ಹವಾಮಾನಶಾಸ್ತ್ರಜ್ಞರು ಈ ಹಿಂದೆ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಬೀಪರ್‌ಜಾಯ್‌ ಚಂಡಮಾರುತದ ರಚನೆಯನ್ನು ತಿಳಿಸಿದ್ದರು ಮತ್ತು ಅದು ಎಲ್ಲಾ ಸಂವಹನವನ್ನು ತನ್ನ ಹಾದಿಯಲ್ಲಿ ಎಳೆದುಕೊಂಡು ಮಾನ್ಸೂನ್ ಹರಿವು ದುರ್ಬಲಗೊಳ್ಳಲು ಕಾರಣವಾಯಿತು ಎಂದು ಹೇಳಿದ್ದರು. ಚಂಡಮಾರುತವು ಚದುರಿದ ನಂತರ ಮಾನ್ಸೂನ್ ಹರಿವು ಸರಿಯಾಗಿ ಪುನರಾರಂಭಗೊಳ್ಳುವ ನಿರೀಕ್ಷೆಯಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

16 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago