ವೆದರ್ ಮಿರರ್

ಕೇರಳಕ್ಕೆ ಮುಂಗಾರು ಪ್ರವೇಶ | ಎರಡು ದಿನದಲ್ಲಿ ದುರ್ಬಲ ಮುಂಗಾರು ರಾಜ್ಯಕ್ಕೆ ಪ್ರವೇಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ  ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ. ಈ ನಡುವೆ ಮುಂದಿನ ಐದು ದಿನಗಳ ಕಾಲ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರ ತಡವಾಗಿ ಮುಂಗಾರು ಮಾರುತಗಳು ಕೇರಳಕ್ಕೆ ಪ್ರವೇಶ ಪಡೆದುಕೊಂಡಿದೆ. ಗುರುವಾರ ರಾಜ್ಯದ ಶೇ.95ರಷ್ಟು  ಪ್ರದೇಶಗಳಲ್ಲಿ ಮಳೆಯಾಗಿದೆ. 48 ತಾಸುಗಳಲ್ಲಿ ರಾಜ್ಯಕ್ಕೆ ಮಾನ್ಸೂನ್ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪರ್ ಜಾಯ್ ಚಂಡಮಾರುತದ ಹೊಡೆತದಿಂದ ಕರ್ನಾಟಕದ ಕರಾವಳಿ ಭಾಗ ಪಾರಾಗಿದೆ. ಬಿಪರ್ ಜಾಯ್ ಸೈಕ್ಲೋನ್ ಕರಾವಳಿಯ ನೈರುತ್ಯ ಭಾಗದಿಂದ 900 ಕಿಮೀ ದೂರದಲ್ಲಿದ್ದು, ರಾಜ್ಯದ ಕರಾವಳಿ ಸಮೀಪಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ಗಂಟೆಗೆ 35-45 ಕಿಲೋ ಮೀಟರ್​ನಿಂದ  55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಅಂದಾಜಿದೆ.
ಹವಾಮಾನ ತಜ್ಞರು ಮತ್ತು ಹವಾಮಾನಶಾಸ್ತ್ರಜ್ಞರು ಈ ಹಿಂದೆ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಬೀಪರ್‌ಜಾಯ್‌ ಚಂಡಮಾರುತದ ರಚನೆಯನ್ನು ತಿಳಿಸಿದ್ದರು ಮತ್ತು ಅದು ಎಲ್ಲಾ ಸಂವಹನವನ್ನು ತನ್ನ ಹಾದಿಯಲ್ಲಿ ಎಳೆದುಕೊಂಡು ಮಾನ್ಸೂನ್ ಹರಿವು ದುರ್ಬಲಗೊಳ್ಳಲು ಕಾರಣವಾಯಿತು ಎಂದು ಹೇಳಿದ್ದರು. ಚಂಡಮಾರುತವು ಚದುರಿದ ನಂತರ ಮಾನ್ಸೂನ್ ಹರಿವು ಸರಿಯಾಗಿ ಪುನರಾರಂಭಗೊಳ್ಳುವ ನಿರೀಕ್ಷೆಯಿತ್ತು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

21 minutes ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

7 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

8 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

8 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

8 hours ago