ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ. ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.
ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…