#Drought | ಕೈ ಕೊಟ್ಟ ಮುಂಗಾರು | ರಾಜ್ಯದ 28 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೇವಲ 26% ಮಾತ್ರ ಬಿತ್ತನೆ

July 16, 2023
11:25 AM
ರಾಜ್ಯಾದ್ಯಂತ ಮುಂಗಾರು ಕೊರತೆ, ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ, 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ

ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ. ಬಾಗಲಕೋಟೆ#Bagalkot ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.

ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9% 

ಕೃಪೆ : ಅಂತರ್ಜಾಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror