ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.
ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%
ಕೃಪೆ : ಅಂತರ್ಜಾಲ
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…