Advertisement
ಪ್ರಮುಖ

#Drought | ಕೈ ಕೊಟ್ಟ ಮುಂಗಾರು | ರಾಜ್ಯದ 28 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೇವಲ 26% ಮಾತ್ರ ಬಿತ್ತನೆ

Share

ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ. ಬಾಗಲಕೋಟೆ#Bagalkot ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.

ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9% 

ಕೃಪೆ : ಅಂತರ್ಜಾಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

1 hour ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

13 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

13 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

14 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

1 day ago