ಈ ಬಾರಿ ಮುಂಗಾರು ಕೈ ಕೊಟ್ಟಿತ್ತು. ಆದರೆ ಕಳೆದ 3-4 ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಸೇರಿದಂತೆ ಭಾರಿ ಮಳೆಯಾದ ಹಿನ್ನೆಲೆ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಮರ ಬಿದ್ದ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.
ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆ ಸ್ಥಳೀಯರು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು, ಮೂಡಿಗೆರೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆ ಜೊತೆ ರಣಗಾಳಿ ಬೀಸಿದ್ದು, ಭಾರೀ ಗಾಳಿ-ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ತಂತಿ ಮೇಲೆ ಮರ ಬಿದ್ದ ಪರಿಣಾಮ ಮಲೆನಾಡ ಕೆಲವು ಗ್ರಾಮೀಣ ಭಾಗದಲ್ಲಿ ಕತ್ತಲು ಆವರಿಸಿದೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…