ಈ ಬಾರಿ ಮುಂಗಾರು ಕೈ ಕೊಟ್ಟಿತ್ತು. ಆದರೆ ಕಳೆದ 3-4 ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಸೇರಿದಂತೆ ಭಾರಿ ಮಳೆಯಾದ ಹಿನ್ನೆಲೆ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಮರ ಬಿದ್ದ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.
ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆ ಸ್ಥಳೀಯರು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು, ಮೂಡಿಗೆರೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆ ಜೊತೆ ರಣಗಾಳಿ ಬೀಸಿದ್ದು, ಭಾರೀ ಗಾಳಿ-ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ತಂತಿ ಮೇಲೆ ಮರ ಬಿದ್ದ ಪರಿಣಾಮ ಮಲೆನಾಡ ಕೆಲವು ಗ್ರಾಮೀಣ ಭಾಗದಲ್ಲಿ ಕತ್ತಲು ಆವರಿಸಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…