ಈ ಬಾರಿ ಮುಂಗಾರು ಕೈ ಕೊಟ್ಟಿತ್ತು. ಆದರೆ ಕಳೆದ 3-4 ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಸೇರಿದಂತೆ ಭಾರಿ ಮಳೆಯಾದ ಹಿನ್ನೆಲೆ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಮರ ಬಿದ್ದ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.
ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆ ಸ್ಥಳೀಯರು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು, ಮೂಡಿಗೆರೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆ ಜೊತೆ ರಣಗಾಳಿ ಬೀಸಿದ್ದು, ಭಾರೀ ಗಾಳಿ-ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ತಂತಿ ಮೇಲೆ ಮರ ಬಿದ್ದ ಪರಿಣಾಮ ಮಲೆನಾಡ ಕೆಲವು ಗ್ರಾಮೀಣ ಭಾಗದಲ್ಲಿ ಕತ್ತಲು ಆವರಿಸಿದೆ.
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…