ಕಾವೇರಿ ಜಲಾನಯನ(cauvery belt) ಪ್ರದೇಶದಲ್ಲಿ ಮುಂಗಾರು (Monsoon) ಚುರುಕು ಪಡೆದುಕೊಂಡಿದ್ದು, ಕೆಆರ್ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯಾಗುತ್ತಿದೆ. ಸ್ವಲ್ಪ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಹೀಗಾಗಿ ಒಳಹರಿವಿನ(Inflow) ಪ್ರಮಾಣ ಹೆಚ್ಚಾಗಿದೆ. ಇದೇ ವೇಳೆ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ದುರ್ಮರಣಕ್ಕೀಡಾದ (Death) ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ಮೃತರನ್ನು ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.
ಕೆಆರ್ಎಸ್ ಡ್ಯಾಂ ಒಳಹರಿವಿನ ಪ್ರಮಾಣ 2,241 ಕ್ಯೂಸೆಕ್ ಇದೆ. ನಿನ್ನೆಗಿಂತ ಇಂದು ಒಳಹರಿವಿನಲ್ಲಿ 1,000 ಕ್ಯೂಸೆಕ್ ಹೆಚ್ಚಳವಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 87.90 ಅಡಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್ಎಸ್ನಲ್ಲಿ 14.724 ಟಿಎಂಸಿ ನೀರು ಸಂಗ್ರಹವಾಗಿದೆ. ಕೆಆರ್ಎಸ್ ಡ್ಯಾಂನ ಒಳಹರಿವು 2,241 ಕ್ಯೂಸೆಕ್ ಹಾಗೂ ಡ್ಯಾಂನ ಹೊರ ಹರಿವು 986 ಕ್ಯೂಸೆಕ್ ಇದೆ.
ಸೋಮವಾರ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…