Advertisement
MIRROR FOCUS

ಮುಂಗಾರು ಚುರುಕು | ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ | ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

Share

ಕಾವೇರಿ ಜಲಾನಯನ(cauvery belt) ಪ್ರದೇಶದಲ್ಲಿ ಮುಂಗಾರು (Monsoon) ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ‌ ಹೆಚ್ಚಳವಾಗಿದೆ. ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯಾಗುತ್ತಿದೆ. ಸ್ವಲ್ಪ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಹೀಗಾಗಿ ಒಳಹರಿವಿನ(Inflow) ಪ್ರಮಾಣ ಹೆಚ್ಚಾಗಿದೆ.  ಇದೇ ವೇಳೆ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ದುರ್ಮರಣಕ್ಕೀಡಾದ (Death) ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ಮೃತರನ್ನು ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

ಕೆಆರ್‌ಎಸ್ ಡ್ಯಾಂ ಒಳಹರಿವಿನ ಪ್ರಮಾಣ 2,241 ಕ್ಯೂಸೆಕ್ ಇದೆ. ನಿನ್ನೆಗಿಂತ ಇಂದು ಒಳಹರಿವಿನಲ್ಲಿ 1,000 ಕ್ಯೂಸೆಕ್ ಹೆಚ್ಚಳವಾಗಿದೆ.  124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 87.90 ಅಡಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್‌ಎಸ್‌ನಲ್ಲಿ 14.724 ಟಿಎಂಸಿ ನೀರು ಸಂಗ್ರಹವಾಗಿದೆ. ಕೆಆರ್‌ಎಸ್ ಡ್ಯಾಂನ ಒಳಹರಿವು 2,241 ಕ್ಯೂಸೆಕ್ ಹಾಗೂ ಡ್ಯಾಂನ ಹೊರ ಹರಿವು 986 ಕ್ಯೂಸೆಕ್‌ ಇದೆ.

Advertisement

ಸೋಮವಾರ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

3 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

9 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

9 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

19 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

1 day ago