ಹವಾಮಾನ ವರದಿ | 03-10-2024 | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಹಿಂಗಾರು ಆರಂಭ ವಿಳಂಬ ಸಾಧ್ಯತೆ |

October 3, 2024
12:44 PM
ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ ಪ್ರಮಾಣದ ಗಾಳಿ ಹಾಗೂ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಸೃಷ್ಠಿಯಾಗಿದೆ. ಹಿಂಗಾರು ಆರಂಭ ವಿಳಂಬವಾಗಲಿದೆ.

04.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಅಕ್ಟೊಬರ್ 4ರಿಂದ ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿದ್ದು, ಅಕ್ಟೊಬರ್ 10 ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 4 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿದ್ದು, ಅಕ್ಟೊಬರ್ 8 ರ ತನಕ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕೆಲವು ಭಾಗಗಳಲ್ಲಿ ಸಾಮಾನ್ಯ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ ಪ್ರಮಾಣದ ಗಾಳಿ ಹಾಗೂ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಸೃಷ್ಠಿಯಾಗಿದೆ. ಹಿಂಗಾರು ಆರಂಭ ವಿಳಂಬವಾಗಲಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್
May 5, 2025
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group