Advertisement
ವೆದರ್ ಮಿರರ್

ಹವಾಮಾನ ವರದಿ | 25-10-2024 | ಗುಡುಗು ಸಹಿತ ತುಂತುರು ಮಳೆ | ಹಿಂಗಾರು ಮಳೆ ಮತ್ತೆ ಚುರುಕು ಸಾಧ್ಯತೆ |

Share

26.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ, ಅಕ್ಟೊಬರ್ 30ರ ತನಕ ಮಳೆ ಕಡಿಮೆಯಾದರೂ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸೀಮಿತ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ನಂತರ ಮತ್ತೆ ಗುಡುಗು ಮಳೆ ಪ್ರಾರಂಭವಾಗುವ ಮುನ್ಸೂಚೆನೆ ಇದೆ.

Advertisement

ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 28ರಿಂದ ಮೋಡ ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಪ್ರಾರಂಭವಾಗಿ ಅಕ್ಟೊಬರ್ 31ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ದಕ್ಷಿಣ ಭಾಗಗಳಲ್ಲಿ ಹಾಗೂ ಚಾಮರಾಜನಗರದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಡಾನಾ ಚಂಡಮಾರುತದ ಪ್ರಭಾವದಿಂದ ಈಗ ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಉತ್ತರ ಒಳನಾಡಿನಲ್ಲಿ ಒಣ ಹವೆ ಉಂಟಾಗಿದ್ದು, ಇದು ತಾತ್ಕಾಲಿಕವಾಗಿರಬಹುದು.

Advertisement

ಈ ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೆ, ಅಂದರೆ ಸುಮಾರು ಅಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ನಿರ್ಮಾಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ

ಸಂಚಾರ ವಲಯದಲ್ಲಿ ಮೂಲಸೌಕರ್ಯ ತಂತ್ರಜ್ಞಾನ ಕುರಿತ ಟ್ರಾಫಿಕ್  ಇನ್ಫ್ರಾ ಟೆಕ್  ಪ್ರದರ್ಶನವನ್ನು ದೆಹಲಿಯಲ್ಲಿ…

2 mins ago

ಶೇ.61 ರಷ್ಟು ಹಿಂಗಾರು ಮಳೆ ಹೆಚ್ಚು |  7 ಜಿಲ್ಲೆಗಳಲ್ಲಿ ಬೆಳೆ , ಆಸ್ತಿಪಾಸ್ತಿ ಹಾನಿ | ಸಮೀಕ್ಷಗೆ ಸೂಚನೆ |

ರಾಜ್ಯದಲ್ಲಿ ಸುಮಾರು  1 ಲಕ್ಷ  ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ.…

1 hour ago

ಉಡುಪಿಯಲ್ಲಿ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿದ ಯೋಗ ಗುರು ರಾಮದೇವ್ |

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು …

1 hour ago

ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು  “ಮತ್ಸ್ಯವಾಹಿನಿ” ಯೋಜನೆ

ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ…

2 hours ago

ನಿರಂತರ ಮಳೆಗೆ ಬೆಳೆ ನಾಶ – ಚಿಕ್ಕಮಗಳೂರಿನಲ್ಲಿ ತರಕಾರಿ ಬೆಳೆಗಳು ಹಾನಿ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು,…

2 hours ago

ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ಮನೆಯಲ್ಲಿಯೇ ಆಧಾರ್ ಅಪ್ಡೇಟ್‌ | ಮಾದರಿಯಾದ ಅಂಚೆ ಇಲಾಖೆಯ ಸೇವೆ |

ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ…

19 hours ago