ಹವಾಮಾನ ವರದಿ | 02-09-2025 | ಬದಲಾದ ಹವಾಮಾನ – ಭಾರೀ ಮಳೆಯ ನಿರೀಕ್ಷೆ ಏನಾಯ್ತು..?

September 2, 2025
1:57 PM
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲೇ ಶಿಥಿಲಗೊಳ್ಳುವ ಲಕ್ಷಣವಿರುವುದರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.

03.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಬಿಡುವಿನ ಅಂತರ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಭಾರಿ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಬಿಟ್ಟು ಬಿಟ್ಟು ಸಾಮಾನ್ಯ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಮಲೆನಾಡು ಭಾಗಗಳಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಸೆಪ್ಟೆಂಬರ್ 7ರ ತನಕ ಬಿಸಿಲಿನೊಂದಿಗೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ
ಇದೆ. ದಾವಣಗೆರೆ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲೇ ಶಿಥಿಲಗೊಳ್ಳುವ ಲಕ್ಷಣವಿರುವುದರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror