#RainAlert| ಉತ್ತರದಿಂದ ದಕ್ಷಿಣಕ್ಕೂ ಸಾಗಿದ ಮುಂಗಾರು ಅವಾಂತರ | ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

July 26, 2023
12:06 PM
ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ

ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಹೈದರಾಬಾದ್‌ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror