ಪ್ರಮುಖ

#RainAlert| ಉತ್ತರದಿಂದ ದಕ್ಷಿಣಕ್ಕೂ ಸಾಗಿದ ಮುಂಗಾರು ಅವಾಂತರ | ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.

Advertisement
ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಹೈದರಾಬಾದ್‌ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

3 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

4 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

4 hours ago

ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…

4 hours ago

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

17 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago