Advertisement
ಪ್ರಮುಖ

#RainAlert| ಉತ್ತರದಿಂದ ದಕ್ಷಿಣಕ್ಕೂ ಸಾಗಿದ ಮುಂಗಾರು ಅವಾಂತರ | ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

Share

ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಹೈದರಾಬಾದ್‌ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

21 minutes ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

52 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

1 hour ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago