Advertisement
ಪ್ರಮುಖ

#RainAlert| ಉತ್ತರದಿಂದ ದಕ್ಷಿಣಕ್ಕೂ ಸಾಗಿದ ಮುಂಗಾರು ಅವಾಂತರ | ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

Share

ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಹೈದರಾಬಾದ್‌ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

19 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago