Advertisement
ಸುದ್ದಿಗಳು

ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

Share

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

5 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

6 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

21 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago