Advertisement
ಸುದ್ದಿಗಳು

ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

Share

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 hour ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

6 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago