ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ. ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…