ಸುದ್ದಿಗಳು

#Drought | ಇನ್ನೂ ಬಾರದ ಮುಂಗಾರು ಮಳೆ | ದೇವರಿಗೆ ಜಲ ದಿಗ್ಬಂಧನ ಹಾಕಿ ಶಿಕ್ಷೆ ನೀಡಿದ ಗ್ರಾಮಸ್ಥರು : ಇನ್ನಾದರೂ ವರುಣ ದೇವ ಒಲಿವನೇ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.

Advertisement
Advertisement

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ.  ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.

ಅದರಂತೆ ಇದೀಗ ಗರ್ಭಗುಡಿಯಲ್ಲಿ ನೀರು ಹಾಕಿ, ಬೀಗ ಹಾಕಿದ್ದಾರೆ. ಜೂನ್ ತಿಂಗಳು ಶುರುವಾಗಿ ಈಗಾಗಲೇ ಅರ್ಧ ತಿಂಗಳು ಕಳೆದಿದ್ದು, ಆದರೂ ಕೂಡ ಮುಂಗಾರು ಮಳೆ ಇನ್ನು ಬಂದಿಲ್ಲ. ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು, ಉತ್ತರ ಕರ್ನಾಟಕದಲ್ಲಿ ಬರಗಾಲ ಛಾಯೆ ಮೂಡಿದೆ. ಜಿಲ್ಲೆಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ವೇದಗಂಗಾ, ದೂಧ್ ಗಂಗಾ, ಮಾರ್ಕಂಡೇಯ ಹೀಗೆ ಏಳಕ್ಕೆ ಏಳು ನದಿಗಳು ಬತ್ತುವ ಆತಂಕ ಎದುರಾಗಿದೆ.
( ಅಂತರ್ಜಾಲ ಮಾಹಿತಿ)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

48 minutes ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

2 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

5 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

5 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

5 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago