ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ. ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…