Advertisement
ಸುದ್ದಿಗಳು

#Drought | ಇನ್ನೂ ಬಾರದ ಮುಂಗಾರು ಮಳೆ | ದೇವರಿಗೆ ಜಲ ದಿಗ್ಬಂಧನ ಹಾಕಿ ಶಿಕ್ಷೆ ನೀಡಿದ ಗ್ರಾಮಸ್ಥರು : ಇನ್ನಾದರೂ ವರುಣ ದೇವ ಒಲಿವನೇ..?

Share

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ.  ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.

ಅದರಂತೆ ಇದೀಗ ಗರ್ಭಗುಡಿಯಲ್ಲಿ ನೀರು ಹಾಕಿ, ಬೀಗ ಹಾಕಿದ್ದಾರೆ. ಜೂನ್ ತಿಂಗಳು ಶುರುವಾಗಿ ಈಗಾಗಲೇ ಅರ್ಧ ತಿಂಗಳು ಕಳೆದಿದ್ದು, ಆದರೂ ಕೂಡ ಮುಂಗಾರು ಮಳೆ ಇನ್ನು ಬಂದಿಲ್ಲ. ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು, ಉತ್ತರ ಕರ್ನಾಟಕದಲ್ಲಿ ಬರಗಾಲ ಛಾಯೆ ಮೂಡಿದೆ. ಜಿಲ್ಲೆಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ವೇದಗಂಗಾ, ದೂಧ್ ಗಂಗಾ, ಮಾರ್ಕಂಡೇಯ ಹೀಗೆ ಏಳಕ್ಕೆ ಏಳು ನದಿಗಳು ಬತ್ತುವ ಆತಂಕ ಎದುರಾಗಿದೆ.
( ಅಂತರ್ಜಾಲ ಮಾಹಿತಿ)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago