ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ. ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…