ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

May 24, 2025
9:23 PM
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

26.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿದೆ.

ಮಹಾರಾಷ್ಟ್ರದ ಕರಾವಳಿ ತಲುಪಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೂ ಅಲ್ಪ ಪ್ರಮಾಣದಲ್ಲಿ ತಿರುಗುತ್ತಿದ್ದು, ಭೂ ಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಮುಂಗಾರು ಕೇರಳದಿಂದ ಮಹಾರಾಷ್ಟ್ರ ತನಕವೂ ಒಮ್ಮೆಲೇ ಆರಂಭವಾಗಿದೆ.  ರಾಜ್ಯದಾದ್ಯಂತ ಅಬ್ಬರಿಸಲಿರುವ ಮುಂಗಾರು ಮಳೆಯು ಈ ತಿಂಗಳ ಕೊನೆಯ ತನಕ ಮುಂದುವರಿದು, ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಅಂದರೆ ಜೂನ್ 2 ಅಥವಾ 3ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 25ರಿಂದ 30ರ ತನಕ ಭಾರಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror