Advertisement
ವೆದರ್ ಮಿರರ್

ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

Share

26.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿದೆ.

ಮಹಾರಾಷ್ಟ್ರದ ಕರಾವಳಿ ತಲುಪಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೂ ಅಲ್ಪ ಪ್ರಮಾಣದಲ್ಲಿ ತಿರುಗುತ್ತಿದ್ದು, ಭೂ ಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಮುಂಗಾರು ಕೇರಳದಿಂದ ಮಹಾರಾಷ್ಟ್ರ ತನಕವೂ ಒಮ್ಮೆಲೇ ಆರಂಭವಾಗಿದೆ.  ರಾಜ್ಯದಾದ್ಯಂತ ಅಬ್ಬರಿಸಲಿರುವ ಮುಂಗಾರು ಮಳೆಯು ಈ ತಿಂಗಳ ಕೊನೆಯ ತನಕ ಮುಂದುವರಿದು, ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಅಂದರೆ ಜೂನ್ 2 ಅಥವಾ 3ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 25ರಿಂದ 30ರ ತನಕ ಭಾರಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

7 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago