ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ ಜಿಲ್ಲೆಯ ಕದ್ರಾದಲ್ಲಿ ಅತಿಹೆಚ್ಚು 11 ಸೆಂಟಿ ಮೀಟರ್ ಮಳೆಯಾಗಿದೆ. ಕಾರ್ಕಳ 5, ಕ್ಯಾಸಲ್ರಾಕ್ 4, ಸಿದ್ದಾಪುರ, ಮೂಡಬಿದ್ರೆ ಮತ್ತು ಕೊಟ್ಟಿಗೆಹಾರ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಭಾಗಮಂಡಲ, ಶೃಂಗೇರಿ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಮಂಗಳೂರು ಮತ್ತು ಯಲ್ಲಾಪುರದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 30, ಕನಿಷ್ಠ 21 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಸಂಭವ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…