Advertisement
ಸುದ್ದಿಗಳು

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭ | ನಾಳೆ ʼಮೋದಿ 3.0ʼ ಕೇಂದ್ರ ಬಜೆಟ್‌ ಮಂಡನೆ

Share

ಮೂರನೇ ಬಾರಿಗೆಪ್ರಧಾನಿ ನರೇಂದ್ರ ಮೋದಿ (Narendra Modi) ನಾಯಕತ್ವದ ಬಿಜೆಪಿ(BJP) ನೇತೃತ್ವದ ಎನ್‌ಡಿಎ(NDA) ಅಧಿಕಾರಕ್ಕೆ ಬಂದರೂ, ಸುಖ ಅನ್ನೋದು ಇಲ್ಲ. ಸ್ವತಂತ್ರ್ಯವಾಗಿ ಅಧಿಕಾರ ನಡೆಸಲು ಅಡ್ಡಿ, ಪ್ರಬಲವಾದ ವಿರೋಧ ಪಕ್ಷ. ಈ ಎಲ್ಲಾ ಅಡೆ-ತಡೆಗಳ ನಡುವೆ ಆಡಳಿತಾರೂಢ ಎನ್‌ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ (Budget Session) ಇಂದಿನಿಂದ ಆರಂಭವಾಗಲಿದೆ.

19 ದಿನಗಳ ಕಾಲ ನಡೆಯಲಿರುವ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ನೀಟ್‌, ನೆಟ್‌ ಪರೀಕ್ಷಾ ಅಕ್ರಮ, ಐಎಎಸ್‌ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್‌ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಇಂಡಿಯಾ ಮೈತ್ರಿಕೂಟ ಸಜ್ಜಾಗಿದೆ.

ಈ ಅಧಿವೇಶನದಲ್ಲಿ 5 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಹಣಕಾಸು ಮಸೂದೆ, 2024. ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024 PRS ಶಾಸನದ ಪ್ರಕಾರ, ವಿಪತ್ತು ನಿರ್ವಹಣೆಯಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಪಾತ್ರಗಳಲ್ಲಿ ಸ್ಪಷ್ಟತೆ ಮತ್ತು ಒಮ್ಮುಖವನ್ನು ತರಲು ಪ್ರಯತ್ನಿಸುತ್ತದೆ.  ಭಾರತೀಯ ವಾಯುಯಾನ ವಿಧೇಯಕ- 2024 ಏರ್‌ಕ್ರಾಫ್ಟ್ ಆಕ್ಟ್, 1934 ಅನ್ನು ಬದಲಿಸುತ್ತದೆ. ಅಸ್ಪಷ್ಟತೆಗಳು ಮತ್ತು ಪುನರಾವರ್ತನೆಗಳನ್ನು ಪರಿಹರಿಸಲು, ಉತ್ಪಾದನೆ ಮತ್ತು ವ್ಯವಹಾರವನ್ನು ಸುಲಭಗೊಳಿಸಲು, ಅಂತರರಾಷ್ಟ್ರೀಯ ಸಂಪ್ರದಾಯಗಳ ನಿಬಂಧನೆಗಳನ್ನು ಜಾರಿಗೆ ತರಲು ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಜಾರಿಗೆ ತರಲು ಅನುವು ಮಾಡಿಕೊಡುತ್ತದೆ.

ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಬಜೆಟ್‌ (Union Budget 2024) ಅನ್ನು ಇದೇ ಜು.23 ರಂದು ಮಂಡಿಸಲಾಗುವುದು. ಮೋದಿ ಸಂಪುಟದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮೋದಿ 3.0 ಬಜೆಟ್‌ ಮಂಡಿಸಲಿದ್ದಾರೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮಂಡಿಸಲಾಗುತ್ತಿರುವ ಮೊದಲ ಬಜೆಟ್‌ ಇದಾಗಿದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago