Advertisement
MIRROR FOCUS

ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |

Share

ಸಂಸತ್ತಿನ ಮುಂಗಾರು ಅಧಿವೇಶನವನ್ನು ವಿಜಯೋತ್ಸವದ ಅಧಿವೇಶನದ ರೂಪದಲ್ಲಿ ನಾವು ನೋಡಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…… ಮುಂದೆ ಓದಿ……

ಸಂಸತ್ ಕಲಾಪ ಆರಂಭಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಅವರು, ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ ತ್ರಿವರ್ಣ ಧ್ವಜ ಹಾರಾಡುವಂತಾಗಿದ್ದು, ಶುಭಾಂಶು ಶುಕ್ಲಾ ಅಂತರಿಕ್ಷ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ವಿಶ್ವದಲ್ಲಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಇಡೀ ವಿಶ್ವಕ್ಕೆ ಸೇನಾ ಸಾಮರ್ಥ್ಯ ಏನೆಂಬುದು ತಿಳಿದಿದೆ. ಭಯೋತ್ಪಾದಕರ ಕೋಟೆಯೊಳಗೆ ನುಗ್ಗಿ ಕಡಿಮೆ ಅವಧಿಯಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಸೇನಾಶಕ್ತಿ ಅನಾವರಣಗೊಂಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ವಿಜಯದ ಭಾವನೆಯನ್ನು ಒಂದೇ ಸ್ವರದಲ್ಲಿ ವ್ಯಕ್ತಪಡಿಸಲು ಈ ಸದನ ವಿಜಯೋತ್ಸವದ ವೇದಿಕೆ ಎಂಬಂತಾಗಿದೆ ಎಂದು ಹೇಳಿದರು.

ದೇಶಾದ್ಯಂತ ಮುಂಗಾರು ಚುರುಕಾಗಿದ್ದು, ಎಲ್ಲೆಡೆ ಉತ್ತಮ ವಾತಾವರಣವಿದೆ. ಕೃಷಿಗೆ ಹೆಚ್ಚು ಲಾಭದಾಯಕವಾಗಿದ್ದು, ರೈತರು, ಗ್ರಾಮೀಣ ಪ್ರದೇಶದ ಜನತೆ, ಕುಟುಂಬ ವರ್ಗ ಹಾಗೂ ದೇಶದ ಅರ್ಥವ್ಯವಸ್ಥೆಗೆ ಪೂರಕವಾಗಿದೆ. ಈ ಮುಂಗಾರು ಅಧಿವೇಶನ ರಾಷ್ಟ್ರಕ್ಕೆ ಗೌರವಪೂರ್ಣ ಹಾಗೂ ವಿಜಯೋತ್ಸವವಾಗಿದೆ ಎಂದು ತಿಳಿಸಿದರು.

ದೇಶದ ಕೆಲವೆಡೆ ನಕ್ಸಲ್ ಸಮಸ್ಯೆ ಇನ್ನೂ ಇದೆ. ಈಗಾಗಾಲೇ ಹಲವಾರು ಪ್ರದೇಶಗಳು ನಕ್ಸಲ್ ಮುಕ್ತವಾಗಿವೆ. ಮುಂಬರುವ ದಿನಗಳಲ್ಲಿ  ಮಾವೋವಾದವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲಾಗುವುದು. ದೇಶದ ಹಿತಾಸಕ್ತಿ ದೃಷ್ಟಿಯಿಂದ ಈ ಕಲಾಪದಲ್ಲಿ ಎಲ್ಲ ಸದಸ್ಯರು ಉತ್ತಮ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು.  ಭಾರತ ವಿಶ್ವದ ಮೂರನೇ ಅರ್ಥವ್ಯವಸ್ಥೆ ದೇಶವಾಗುವತ್ತ ಮುನ್ನಡೆದಿದೆ.  ದೇಶದ ಉಜ್ವಲ ಭವಿಷ್ಯ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

6 minutes ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

5 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

10 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

22 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago