Advertisement
MIRROR FOCUS

ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |

Share

ಸಂಸತ್ತಿನ ಮುಂಗಾರು ಅಧಿವೇಶನವನ್ನು ವಿಜಯೋತ್ಸವದ ಅಧಿವೇಶನದ ರೂಪದಲ್ಲಿ ನಾವು ನೋಡಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…… ಮುಂದೆ ಓದಿ……

ಸಂಸತ್ ಕಲಾಪ ಆರಂಭಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಅವರು, ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ ತ್ರಿವರ್ಣ ಧ್ವಜ ಹಾರಾಡುವಂತಾಗಿದ್ದು, ಶುಭಾಂಶು ಶುಕ್ಲಾ ಅಂತರಿಕ್ಷ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ವಿಶ್ವದಲ್ಲಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಇಡೀ ವಿಶ್ವಕ್ಕೆ ಸೇನಾ ಸಾಮರ್ಥ್ಯ ಏನೆಂಬುದು ತಿಳಿದಿದೆ. ಭಯೋತ್ಪಾದಕರ ಕೋಟೆಯೊಳಗೆ ನುಗ್ಗಿ ಕಡಿಮೆ ಅವಧಿಯಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಸೇನಾಶಕ್ತಿ ಅನಾವರಣಗೊಂಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ವಿಜಯದ ಭಾವನೆಯನ್ನು ಒಂದೇ ಸ್ವರದಲ್ಲಿ ವ್ಯಕ್ತಪಡಿಸಲು ಈ ಸದನ ವಿಜಯೋತ್ಸವದ ವೇದಿಕೆ ಎಂಬಂತಾಗಿದೆ ಎಂದು ಹೇಳಿದರು.

ದೇಶಾದ್ಯಂತ ಮುಂಗಾರು ಚುರುಕಾಗಿದ್ದು, ಎಲ್ಲೆಡೆ ಉತ್ತಮ ವಾತಾವರಣವಿದೆ. ಕೃಷಿಗೆ ಹೆಚ್ಚು ಲಾಭದಾಯಕವಾಗಿದ್ದು, ರೈತರು, ಗ್ರಾಮೀಣ ಪ್ರದೇಶದ ಜನತೆ, ಕುಟುಂಬ ವರ್ಗ ಹಾಗೂ ದೇಶದ ಅರ್ಥವ್ಯವಸ್ಥೆಗೆ ಪೂರಕವಾಗಿದೆ. ಈ ಮುಂಗಾರು ಅಧಿವೇಶನ ರಾಷ್ಟ್ರಕ್ಕೆ ಗೌರವಪೂರ್ಣ ಹಾಗೂ ವಿಜಯೋತ್ಸವವಾಗಿದೆ ಎಂದು ತಿಳಿಸಿದರು.

ದೇಶದ ಕೆಲವೆಡೆ ನಕ್ಸಲ್ ಸಮಸ್ಯೆ ಇನ್ನೂ ಇದೆ. ಈಗಾಗಾಲೇ ಹಲವಾರು ಪ್ರದೇಶಗಳು ನಕ್ಸಲ್ ಮುಕ್ತವಾಗಿವೆ. ಮುಂಬರುವ ದಿನಗಳಲ್ಲಿ  ಮಾವೋವಾದವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲಾಗುವುದು. ದೇಶದ ಹಿತಾಸಕ್ತಿ ದೃಷ್ಟಿಯಿಂದ ಈ ಕಲಾಪದಲ್ಲಿ ಎಲ್ಲ ಸದಸ್ಯರು ಉತ್ತಮ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು.  ಭಾರತ ವಿಶ್ವದ ಮೂರನೇ ಅರ್ಥವ್ಯವಸ್ಥೆ ದೇಶವಾಗುವತ್ತ ಮುನ್ನಡೆದಿದೆ.  ದೇಶದ ಉಜ್ವಲ ಭವಿಷ್ಯ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

7 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

14 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

16 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

16 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago