ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು ಕಡೆ ಮಳೆ ಆರಂಭವಾಗಿದೆ. ಜೂನ್.1 ರ ಸುಮಾರಿಗೆ ಕೇರಳದ ಹಲವು ಕಡೆ ಮಳೆ ಆರಂಭವಾಗಿ ಕೇರಳ ಮತ್ತು ಮಾಹೆ, ತಮಿಳುನಾಡು ಕರಾವಳಿಯಲ್ಲಿ ಮಳೆಯಾಗಲಿದೆ. ಜೂ. 02 ಮತ್ತು 03 ಜೂನ್ ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವೆದರ್ ಅಪ್ಡೇಟ್ ನೀಡಿದೆ.
ನೈಋತ್ಯ ಮಾನ್ಸೂನ್ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1ರ ಮೊದಲು ಕೇರಳಕ್ಕೆ ಮುಂಗಾರು ಆಗಮಿಸಲಿದೆ ಎನ್ನುವುದು ಇನ್ನೊಮ್ಮೆ ಖಚಿತವಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮತ್ತೊಮ್ಮೆ ಅಪ್ಡೇಟ್ ನೀಡಿದೆ. ಜೂನ್ 02 ಹಾಗೂ 03 ರಂದು ದಕ್ಷಿಣ ಅಂಡಮಾನ್ ಸಮುದ್ರದ ಎಲ್ಲಾ ಪ್ರದೇಶಗಳಲ್ಲಿ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…