ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು ಕಡೆ ಮಳೆ ಆರಂಭವಾಗಿದೆ. ಜೂನ್.1 ರ ಸುಮಾರಿಗೆ ಕೇರಳದ ಹಲವು ಕಡೆ ಮಳೆ ಆರಂಭವಾಗಿ ಕೇರಳ ಮತ್ತು ಮಾಹೆ, ತಮಿಳುನಾಡು ಕರಾವಳಿಯಲ್ಲಿ ಮಳೆಯಾಗಲಿದೆ. ಜೂ. 02 ಮತ್ತು 03 ಜೂನ್ ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವೆದರ್ ಅಪ್ಡೇಟ್ ನೀಡಿದೆ.
ನೈಋತ್ಯ ಮಾನ್ಸೂನ್ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1ರ ಮೊದಲು ಕೇರಳಕ್ಕೆ ಮುಂಗಾರು ಆಗಮಿಸಲಿದೆ ಎನ್ನುವುದು ಇನ್ನೊಮ್ಮೆ ಖಚಿತವಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮತ್ತೊಮ್ಮೆ ಅಪ್ಡೇಟ್ ನೀಡಿದೆ. ಜೂನ್ 02 ಹಾಗೂ 03 ರಂದು ದಕ್ಷಿಣ ಅಂಡಮಾನ್ ಸಮುದ್ರದ ಎಲ್ಲಾ ಪ್ರದೇಶಗಳಲ್ಲಿ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…