ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು ಕಡೆ ಮಳೆ ಆರಂಭವಾಗಿದೆ. ಜೂನ್.1 ರ ಸುಮಾರಿಗೆ ಕೇರಳದ ಹಲವು ಕಡೆ ಮಳೆ ಆರಂಭವಾಗಿ ಕೇರಳ ಮತ್ತು ಮಾಹೆ, ತಮಿಳುನಾಡು ಕರಾವಳಿಯಲ್ಲಿ ಮಳೆಯಾಗಲಿದೆ. ಜೂ. 02 ಮತ್ತು 03 ಜೂನ್ ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವೆದರ್ ಅಪ್ಡೇಟ್ ನೀಡಿದೆ.
ನೈಋತ್ಯ ಮಾನ್ಸೂನ್ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1ರ ಮೊದಲು ಕೇರಳಕ್ಕೆ ಮುಂಗಾರು ಆಗಮಿಸಲಿದೆ ಎನ್ನುವುದು ಇನ್ನೊಮ್ಮೆ ಖಚಿತವಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮತ್ತೊಮ್ಮೆ ಅಪ್ಡೇಟ್ ನೀಡಿದೆ. ಜೂನ್ 02 ಹಾಗೂ 03 ರಂದು ದಕ್ಷಿಣ ಅಂಡಮಾನ್ ಸಮುದ್ರದ ಎಲ್ಲಾ ಪ್ರದೇಶಗಳಲ್ಲಿ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…