ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು ಕಡೆ ಮಳೆ ಆರಂಭವಾಗಿದೆ. ಜೂನ್.1 ರ ಸುಮಾರಿಗೆ ಕೇರಳದ ಹಲವು ಕಡೆ ಮಳೆ ಆರಂಭವಾಗಿ ಕೇರಳ ಮತ್ತು ಮಾಹೆ, ತಮಿಳುನಾಡು ಕರಾವಳಿಯಲ್ಲಿ ಮಳೆಯಾಗಲಿದೆ. ಜೂ. 02 ಮತ್ತು 03 ಜೂನ್ ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವೆದರ್ ಅಪ್ಡೇಟ್ ನೀಡಿದೆ.
ನೈಋತ್ಯ ಮಾನ್ಸೂನ್ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1ರ ಮೊದಲು ಕೇರಳಕ್ಕೆ ಮುಂಗಾರು ಆಗಮಿಸಲಿದೆ ಎನ್ನುವುದು ಇನ್ನೊಮ್ಮೆ ಖಚಿತವಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮತ್ತೊಮ್ಮೆ ಅಪ್ಡೇಟ್ ನೀಡಿದೆ. ಜೂನ್ 02 ಹಾಗೂ 03 ರಂದು ದಕ್ಷಿಣ ಅಂಡಮಾನ್ ಸಮುದ್ರದ ಎಲ್ಲಾ ಪ್ರದೇಶಗಳಲ್ಲಿ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…