ಕೇರಳದ ಕಡೆಗೆ ವೇಗವಾಗಿ ಆಗಮಿಸಿದ ನೈರುತ್ಯ ಮಾನ್ಸೂನ್ ಈಗ ಹೆಚ್ಚಿನ ಪ್ರಗತಿ ಕಂಡಿಲ್ಲ. ಹೀಗಾಗಿ ಉತ್ತರ ಕೇರಳ, ಕರ್ನಾಟಕ ಮತ್ತು ಮಧ್ಯ ತಮಿಳುನಾಡಿಗೆ ಈಗ ಮಳೆಯ ನಿರೀಕ್ಷೆ ಇದೆ. ಮೇ 29 ರಂದು ಕೇರಳ, ದಕ್ಷಿಣ ತಮಿಳುನಾಡು ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳನ್ನು ತಲುಪಿದ ನೈಋತ್ಯ ಮಾನ್ಸೂನ್ ನಂತರ ವೇಗ ಪಡೆಯಲಿಲ್ಲ, ದುರ್ಬಲವಾದ ಕಾರಣ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗಿಲ್ಲ.ಆದರೆ ಹವಾಮಾನ ಇಲಾಖೆಯ ಪ್ರಕಾರ ಮಾರುತವು ಕರ್ನಾಟಕದ ಕೆಲವು ಪ್ರದೇಶಗಳಿಗೂ ತಲುಪಿದೆ. ವೇಗ ಪಡೆದ ತಕ್ಷಣವೇ ಮಳೆಯಾಗುವ ನಿರೀಕ್ಷೆ ಇದೆ.
ಮಾನ್ಸೂನ್ ಆರಂಭದ ನಂತರ ಕೇರಳದ 14 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಿದೆ. ಅಲಪ್ಪುಳ ಮತ್ತು ಕೊಟ್ಟಾಯಂನಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದ್ದು, ಕ್ರಮವಾಗಿ 53ಮಿಮೀ ಮತ್ತು 52ಮಿಮೀ ಮಳೆಯಾಗಿದೆ. ಜೂನ್ 2 ರವರೆಗೂ ಇದೇ ಲಕ್ಷಣಗಳು ಮುಂದುವರಿಯಲಿದೆ. ಆದರೆ , ಭಾರತದ ಮಳೆಯಾಶ್ರಿತ ಕೃಷಿ ಪ್ರದೇಶವು ಈ ಮಾನ್ಸೂನ್ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಕಚೇರಿ ಮಂಗಳವಾರ ತಿಳಿಸಿದೆ.
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…