ಕೇರಳದ ಕಡೆಗೆ ವೇಗವಾಗಿ ಆಗಮಿಸಿದ ನೈರುತ್ಯ ಮಾನ್ಸೂನ್ ಈಗ ಹೆಚ್ಚಿನ ಪ್ರಗತಿ ಕಂಡಿಲ್ಲ. ಹೀಗಾಗಿ ಉತ್ತರ ಕೇರಳ, ಕರ್ನಾಟಕ ಮತ್ತು ಮಧ್ಯ ತಮಿಳುನಾಡಿಗೆ ಈಗ ಮಳೆಯ ನಿರೀಕ್ಷೆ ಇದೆ. ಮೇ 29 ರಂದು ಕೇರಳ, ದಕ್ಷಿಣ ತಮಿಳುನಾಡು ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳನ್ನು ತಲುಪಿದ ನೈಋತ್ಯ ಮಾನ್ಸೂನ್ ನಂತರ ವೇಗ ಪಡೆಯಲಿಲ್ಲ, ದುರ್ಬಲವಾದ ಕಾರಣ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗಿಲ್ಲ.ಆದರೆ ಹವಾಮಾನ ಇಲಾಖೆಯ ಪ್ರಕಾರ ಮಾರುತವು ಕರ್ನಾಟಕದ ಕೆಲವು ಪ್ರದೇಶಗಳಿಗೂ ತಲುಪಿದೆ. ವೇಗ ಪಡೆದ ತಕ್ಷಣವೇ ಮಳೆಯಾಗುವ ನಿರೀಕ್ಷೆ ಇದೆ.
ಮಾನ್ಸೂನ್ ಆರಂಭದ ನಂತರ ಕೇರಳದ 14 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಿದೆ. ಅಲಪ್ಪುಳ ಮತ್ತು ಕೊಟ್ಟಾಯಂನಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದ್ದು, ಕ್ರಮವಾಗಿ 53ಮಿಮೀ ಮತ್ತು 52ಮಿಮೀ ಮಳೆಯಾಗಿದೆ. ಜೂನ್ 2 ರವರೆಗೂ ಇದೇ ಲಕ್ಷಣಗಳು ಮುಂದುವರಿಯಲಿದೆ. ಆದರೆ , ಭಾರತದ ಮಳೆಯಾಶ್ರಿತ ಕೃಷಿ ಪ್ರದೇಶವು ಈ ಮಾನ್ಸೂನ್ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಕಚೇರಿ ಮಂಗಳವಾರ ತಿಳಿಸಿದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…