ಕೇರಳದ ಕಡೆಗೆ ವೇಗವಾಗಿ ಆಗಮಿಸಿದ ನೈರುತ್ಯ ಮಾನ್ಸೂನ್ ಈಗ ಹೆಚ್ಚಿನ ಪ್ರಗತಿ ಕಂಡಿಲ್ಲ. ಹೀಗಾಗಿ ಉತ್ತರ ಕೇರಳ, ಕರ್ನಾಟಕ ಮತ್ತು ಮಧ್ಯ ತಮಿಳುನಾಡಿಗೆ ಈಗ ಮಳೆಯ ನಿರೀಕ್ಷೆ ಇದೆ. ಮೇ 29 ರಂದು ಕೇರಳ, ದಕ್ಷಿಣ ತಮಿಳುನಾಡು ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳನ್ನು ತಲುಪಿದ ನೈಋತ್ಯ ಮಾನ್ಸೂನ್ ನಂತರ ವೇಗ ಪಡೆಯಲಿಲ್ಲ, ದುರ್ಬಲವಾದ ಕಾರಣ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗಿಲ್ಲ.ಆದರೆ ಹವಾಮಾನ ಇಲಾಖೆಯ ಪ್ರಕಾರ ಮಾರುತವು ಕರ್ನಾಟಕದ ಕೆಲವು ಪ್ರದೇಶಗಳಿಗೂ ತಲುಪಿದೆ. ವೇಗ ಪಡೆದ ತಕ್ಷಣವೇ ಮಳೆಯಾಗುವ ನಿರೀಕ್ಷೆ ಇದೆ.
ಮಾನ್ಸೂನ್ ಆರಂಭದ ನಂತರ ಕೇರಳದ 14 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಿದೆ. ಅಲಪ್ಪುಳ ಮತ್ತು ಕೊಟ್ಟಾಯಂನಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದ್ದು, ಕ್ರಮವಾಗಿ 53ಮಿಮೀ ಮತ್ತು 52ಮಿಮೀ ಮಳೆಯಾಗಿದೆ. ಜೂನ್ 2 ರವರೆಗೂ ಇದೇ ಲಕ್ಷಣಗಳು ಮುಂದುವರಿಯಲಿದೆ. ಆದರೆ , ಭಾರತದ ಮಳೆಯಾಶ್ರಿತ ಕೃಷಿ ಪ್ರದೇಶವು ಈ ಮಾನ್ಸೂನ್ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಕಚೇರಿ ಮಂಗಳವಾರ ತಿಳಿಸಿದೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…