Advertisement
MIRROR FOCUS

2025 ಮುಂಗಾರು ಮಳೆ | ಸಾಮಾನ್ಯವಾಗಿರಲಿದೆ ಈ ಬಾರಿಯ ಮುಂಗಾರು |

Share

ಈ ಬಾರಿಯ ಅಂದರೆ 2025 ರ ಮುಂಗಾರು ಮಳೆಯು ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್  ಹೇಳಿದೆ.ಲಾ ನಿನಾದಿಂದ  ತ್ವರಿತ ಪರಿವರ್ತನೆಯಿಂದಾಗಿ ಮತ್ತು ಮುಂಗಾರು ಸಾಮಾನ್ಯಕ್ಕಿಂತ ಅರ್ಧದಷ್ಟು ವೇಗವನ್ನು ಪಡೆಯುವುದರಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ಮುಂಗಾರು 868.6 ಮಿಲಿಮೀಟರ್  ಮಳೆಯು ಸಾಮಾನ್ಯವಾಗಿದೆ  ಎಂದು ಸ್ಕೈಮೆಟ್ ಮಂಗಳವಾರದ ಹೇಳಿಕೆಯಲ್ಲಿ ತಿಳಿಸಿದೆ.…..ಮುಂದೆ ಓದಿ….

ಈ ಬಾರಿ ಲಾ ನಿನಾ ಕೂಡ ದುರ್ಬಲ ಮತ್ತು ಕೆಲ ದಿನಗಳವರೆಗೆ ಮಾತ್ರಾ ಕಂಡಿತ್ತು. ಈಗ ಲಾ ನಿನಾದ  ಪ್ರಭಾವ ಕಡಿಮೆಯಾಗಲು ಪ್ರಾರಂಭಿಸಿವೆ. ಸಾಮಾನ್ಯವಾಗಿ ಮುಂಗಾರು ಮಳೆಯನ್ನುದುರ್ಬಲಗೊಳಿಸುವ ಎಲ್ ನಿನೊ ಸಂಭವಿಸುವುದು ಸದ್ಯದ ಮಟ್ಟಿಗೆ ಅಸಾಧ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ಕಾರಣಗಳಿಂದ ನಿಗದಿತವಾಗಿ ಆರಂಭವಾಗುವ ಮುಂಗಾರು ಸಾಮಾನ್ಯವಾಗಿಯೇ ಮುಂದುವರಿಯಬಹುದು ಎಂದು ಸ್ಕೈಮೆಟ್‌ ಅಂದಾಜಿಸಿದೆ.

ನಮ್ಮ ವ್ಯಾಟ್ಸಪ್‌ ಚಾನೆಲ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಸಾಕಷ್ಟು ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟಗಳಾದ್ಯಂತ, ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುನ್ಸೂಚನೆಯ ಪ್ರಕಾರ, ಈಶಾನ್ಯ ಮತ್ತು ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಈ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

7 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

10 hours ago