Advertisement
MIRROR FOCUS

2025 ಮುಂಗಾರು ಮಳೆ | ಸಾಮಾನ್ಯವಾಗಿರಲಿದೆ ಈ ಬಾರಿಯ ಮುಂಗಾರು |

Share

ಈ ಬಾರಿಯ ಅಂದರೆ 2025 ರ ಮುಂಗಾರು ಮಳೆಯು ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್  ಹೇಳಿದೆ.ಲಾ ನಿನಾದಿಂದ  ತ್ವರಿತ ಪರಿವರ್ತನೆಯಿಂದಾಗಿ ಮತ್ತು ಮುಂಗಾರು ಸಾಮಾನ್ಯಕ್ಕಿಂತ ಅರ್ಧದಷ್ಟು ವೇಗವನ್ನು ಪಡೆಯುವುದರಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ಮುಂಗಾರು 868.6 ಮಿಲಿಮೀಟರ್  ಮಳೆಯು ಸಾಮಾನ್ಯವಾಗಿದೆ  ಎಂದು ಸ್ಕೈಮೆಟ್ ಮಂಗಳವಾರದ ಹೇಳಿಕೆಯಲ್ಲಿ ತಿಳಿಸಿದೆ.…..ಮುಂದೆ ಓದಿ….

ಈ ಬಾರಿ ಲಾ ನಿನಾ ಕೂಡ ದುರ್ಬಲ ಮತ್ತು ಕೆಲ ದಿನಗಳವರೆಗೆ ಮಾತ್ರಾ ಕಂಡಿತ್ತು. ಈಗ ಲಾ ನಿನಾದ  ಪ್ರಭಾವ ಕಡಿಮೆಯಾಗಲು ಪ್ರಾರಂಭಿಸಿವೆ. ಸಾಮಾನ್ಯವಾಗಿ ಮುಂಗಾರು ಮಳೆಯನ್ನುದುರ್ಬಲಗೊಳಿಸುವ ಎಲ್ ನಿನೊ ಸಂಭವಿಸುವುದು ಸದ್ಯದ ಮಟ್ಟಿಗೆ ಅಸಾಧ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ಕಾರಣಗಳಿಂದ ನಿಗದಿತವಾಗಿ ಆರಂಭವಾಗುವ ಮುಂಗಾರು ಸಾಮಾನ್ಯವಾಗಿಯೇ ಮುಂದುವರಿಯಬಹುದು ಎಂದು ಸ್ಕೈಮೆಟ್‌ ಅಂದಾಜಿಸಿದೆ.

ನಮ್ಮ ವ್ಯಾಟ್ಸಪ್‌ ಚಾನೆಲ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಸಾಕಷ್ಟು ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟಗಳಾದ್ಯಂತ, ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುನ್ಸೂಚನೆಯ ಪ್ರಕಾರ, ಈಶಾನ್ಯ ಮತ್ತು ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಈ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

8 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago