Advertisement
MIRROR FOCUS

ರಾಜ್ಯದ ಬಹುತೇಕ ಕಡೆ ಅಬ್ಬರಿಸಲಿದೆ ಹಿಂಗಾರು ಮಳೆ | ರಾಜ್ಯದ 6 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ |

Share

ರಾಜ್ಯದಲ್ಲಿ ಮುಂಗಾರು ಈ ಬಾರಿ ಬಹುತೇಕ ಕೈಕೊಟ್ಟಿತ್ತು. ರಾಜ್ಯದ 120 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ(Drought) ಎಂದು ರಾಜ್ಯ ಸರ್ಕಾರ(State govt) ಘೋಷಣೆ ಮಾಡಿದೆ. ಇದೀಗ ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸೋಮವಾರದಿಂದ ಎಡೆಬಿಡದಂತೆ ಮಳೆ (Rain) ಸುರಿಯುತ್ತಿದೆ. ಇಂದು ಮತ್ತು ನಾಳೆ ಕೂಡ ಜೋರಾಗಿರಲಿದ್ದು, ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯಿಂದ (Indian Meteorological Department) ಮಳೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಮತ್ತು ನಾಳೆ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸಾಧ್ಯತೆ ಇದೆ.

ಗುಡುಗಿನ ಜೊತೆಗೆ ಮೇಲ್ಮೈ ಗಾಳಿ ಬಲವಾಗಿ ಬೀಸುವ ಸಾಧ್ಯತೆ ಇದ್ದು, ಮರದ ಕೆಳಗೆ, ತಾತ್ಕಾಲಿಕ ಶೆಲ್ಟರ್ ಕೆಳಗೆ ನಿಲ್ಲದಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ ಜೊತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ರಾಜಧಾನಿಯಲ್ಲಿ ಭಾರಿ ಮಳೆಯಾಗಿದೆ. ಹಿಂಗಾರು ಅಬ್ಬರಕ್ಕೆ ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ. ಸತತ ಮೂರ್ನಾಲ್ಕು ಗಂಟೆಗಳ ಕಾಲ ಎಡಬಿಡದೆ ಮಳೆ ಸುರಿದಿದೆ. ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಯಲಹಂಕದಲ್ಲಿ ಅತಿಹೆಚ್ಚು ಮಳೆಯಾಗಿದ್ದು, 14.7 ಸೆಂ.ಮೀ ಮಳೆ ದಾಖಲಾಗಿದೆ.

Monsoon rains have lashed the state and many districts including Bengaluru have been receiving non-stop rain since Monday. Today and tomorrow will also be loud, Yellow Alert has been announced for 6 districts of the state. Heavy rain with thunder and lightning has been warned for four days and yellow alert has been announced on Tuesday and Wednesday. Yellow alert has been announced for Chikkamagaluru, Udupi, Dakshina Kannada, Chitradurga, Chikkaballapur, Kolar districts.

- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

4 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

5 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

11 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

11 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

13 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

14 hours ago