Advertisement
MIRROR FOCUS

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭ..,ಇನ್ನು ಹಿಂಗಾರು ಮಳೆಯ ಅಬ್ಬರ..

Share

ವಾಡಿಕೆಯಿಂದ ಮೂರು ದಿನ ಮುಂಚಿತವಾಗಿ ದಕ್ಷಿಣ ರಾಜಸ್ಥಾನದ ಕೆಲವು ಭಾಗಗಳಿಂದ ನೈಋತ್ಯ ಮಾನ್ಸೂನ್ ಹಿಂದೆ ಸರಿಯಲು ಆರಂಭವಾಗಿದೆ ಎಂದು  ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಾಡಿಕೆಯಂತೆ ಸೆಪ್ಟೆಂಬರ್ 17 ರಿಂದ ದಕ್ಷಿಣ ರಾಜಸ್ಥಾನದ ಕೆಲವು ಭಾಗಗಳಿಂದ ಮುಂಗಾರು ಹಿಂದೆ ಸರಿಯುತ್ತದೆ. ಈ ಬಾರಿ ಸೆಪ್ಟೆಂಬರ್ 14 ರಂದು ನೈಋತ್ಯ ಮಾನ್ಸೂನ್ ಹಿಂದೆ ಸರಿಯಲು ಆರಂಭಿಸಿದೆ.  ಈ ವರ್ಷ, ಮೇ 24 ರಂದು ಕೇರಳದಲ್ಲಿ ನೈಋತ್ಯ ಮಾನ್ಸೂನ್ ಆರಂಭವಾಯಿತು. ಮಾನ್ಸೂನ್ ಆರಂಭದ ಸಮಯದಲ್ಲಿ ಅಗತ್ಯವಾದ ಕೆಲವು ಮಾನದಂಡಗಳಂತೆ, ಮಾನ್ಸೂನ್ ಹಿಂದೆಸರಿಯುವ ಅಥವಾ ಹಿಂಗಾರು ಆರಂಭದ ಕೆಲವು ಮಾನದಂಡಗಳು ಭಾನುವಾರ ಆರಂಭವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮಾನ್ಸೂನ್ ಹಿಂತೆಗೆದುಕೊಳ್ಳುವ ರೇಖೆಯು ಶ್ರೀ ಗಂಗಾನಗರ, ನಾಗೌರ್, ಜೋಧ್‌ಪುರ ಮತ್ತು ಬಾರ್ಮರ್ ಮೂಲಕ ಹಾದುಹೋಗಿದೆ.  ಮುಂದಿನ ಎರಡು ಮೂರು ದಿನಗಳಲ್ಲಿ, ರಾಜಸ್ಥಾನದ ಹೆಚ್ಚಿನ ಪ್ರದೇಶಗಳು, ಗುಜರಾತ್ ಮತ್ತು ಪಂಜಾಬ್‌ನ ಕೆಲವು ಪ್ರದೇಶಗಳಿಂದ ಮುಂಗಾರು ಮತ್ತಷ್ಟು ಹಿಂದೆ ಸರಿಯುವ ನಿರೀಕ್ಷೆಯಿದೆ.  ಮುಂದಿನ ಮೂರು ದಿನಗಳಲ್ಲಿ, ಈಶಾನ್ಯ ಪ್ರದೇಶಗಳು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಇಲಾಖೆ ಮಾಹಿತಿ ನೀಡಿದೆ.

ಬಿಹಾರ,  ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಹಿಮಾಚಲ ಪ್ರದೇಶಗಳಲ್ಲಿ  ಹೆಚ್ಚಿನ ಮಳೆಯಾಗಬಹುದು,  ತೆಲಂಗಾಣ, ಕೊಂಕಣ ಮತ್ತು ಗೋವಾ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಮರಾಠವಾಡದ ಪ್ರತ್ಯೇಕ ಸ್ಥಳಗಳಲ್ಲಿಕೂಡಾ ಹೆಚ್ಚಿನ ಮಳೆ ಸಾಧ್ಯತೆ ಇದೆ.
ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಕೂಡಾ ಮಳೆ ಸಾಧ್ಯತೆ ಇದೆ. ಯಾನಂ, ಗಂಗಾನದಿ ಪಶ್ಚಿಮ ಬಂಗಾಳ, ಗುಜರಾತ್ ಪ್ರದೇಶ, ಉತ್ತರಾಖಂಡ, ಪೂರ್ವ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರಗಳು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

13 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

14 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

14 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

14 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago