ವಾಡಿಕೆಯಿಂದ ಮೂರು ದಿನ ಮುಂಚಿತವಾಗಿ ದಕ್ಷಿಣ ರಾಜಸ್ಥಾನದ ಕೆಲವು ಭಾಗಗಳಿಂದ ನೈಋತ್ಯ ಮಾನ್ಸೂನ್ ಹಿಂದೆ ಸರಿಯಲು ಆರಂಭವಾಗಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ವಾಡಿಕೆಯಂತೆ ಸೆಪ್ಟೆಂಬರ್ 17 ರಿಂದ ದಕ್ಷಿಣ ರಾಜಸ್ಥಾನದ ಕೆಲವು ಭಾಗಗಳಿಂದ ಮುಂಗಾರು ಹಿಂದೆ ಸರಿಯುತ್ತದೆ. ಈ ಬಾರಿ ಸೆಪ್ಟೆಂಬರ್ 14 ರಂದು ನೈಋತ್ಯ ಮಾನ್ಸೂನ್ ಹಿಂದೆ ಸರಿಯಲು ಆರಂಭಿಸಿದೆ. ಈ ವರ್ಷ, ಮೇ 24 ರಂದು ಕೇರಳದಲ್ಲಿ ನೈಋತ್ಯ ಮಾನ್ಸೂನ್ ಆರಂಭವಾಯಿತು. ಮಾನ್ಸೂನ್ ಆರಂಭದ ಸಮಯದಲ್ಲಿ ಅಗತ್ಯವಾದ ಕೆಲವು ಮಾನದಂಡಗಳಂತೆ, ಮಾನ್ಸೂನ್ ಹಿಂದೆಸರಿಯುವ ಅಥವಾ ಹಿಂಗಾರು ಆರಂಭದ ಕೆಲವು ಮಾನದಂಡಗಳು ಭಾನುವಾರ ಆರಂಭವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮಾನ್ಸೂನ್ ಹಿಂತೆಗೆದುಕೊಳ್ಳುವ ರೇಖೆಯು ಶ್ರೀ ಗಂಗಾನಗರ, ನಾಗೌರ್, ಜೋಧ್ಪುರ ಮತ್ತು ಬಾರ್ಮರ್ ಮೂಲಕ ಹಾದುಹೋಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ, ರಾಜಸ್ಥಾನದ ಹೆಚ್ಚಿನ ಪ್ರದೇಶಗಳು, ಗುಜರಾತ್ ಮತ್ತು ಪಂಜಾಬ್ನ ಕೆಲವು ಪ್ರದೇಶಗಳಿಂದ ಮುಂಗಾರು ಮತ್ತಷ್ಟು ಹಿಂದೆ ಸರಿಯುವ ನಿರೀಕ್ಷೆಯಿದೆ. ಮುಂದಿನ ಮೂರು ದಿನಗಳಲ್ಲಿ, ಈಶಾನ್ಯ ಪ್ರದೇಶಗಳು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಇಲಾಖೆ ಮಾಹಿತಿ ನೀಡಿದೆ.
ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಹಿಮಾಚಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಬಹುದು, ತೆಲಂಗಾಣ, ಕೊಂಕಣ ಮತ್ತು ಗೋವಾ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಮರಾಠವಾಡದ ಪ್ರತ್ಯೇಕ ಸ್ಥಳಗಳಲ್ಲಿಕೂಡಾ ಹೆಚ್ಚಿನ ಮಳೆ ಸಾಧ್ಯತೆ ಇದೆ.
ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಕೂಡಾ ಮಳೆ ಸಾಧ್ಯತೆ ಇದೆ. ಯಾನಂ, ಗಂಗಾನದಿ ಪಶ್ಚಿಮ ಬಂಗಾಳ, ಗುಜರಾತ್ ಪ್ರದೇಶ, ಉತ್ತರಾಖಂಡ, ಪೂರ್ವ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರಗಳು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…