Advertisement
ಸುದ್ದಿಗಳು

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

Share

ರಾಜ್ಯದ ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಮತ್ತು WWF (World Wide Fund for Nature) ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ‘ಮಿಷನ್ ಪ್ರಕೃತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಮತ್ತು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದದೆ, ವಿಷಯಗಳನ್ನು ಆಳವಾಗಿ ಅರ್ಥೈಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ವಿದ್ಯಾರ್ಥಿಗಳು ಪರಿಸರ ಜಾಗೃತಿ ಮತ್ತು ತ್ಯಾಜ್ಯ ನಿರ್ವಹಣೆ ಸೇರಿದಂತೆ ಸಮಾಜಪರ ಜವಾಬ್ದಾರಿಗಳನ್ನು ಅರಿತುಕೊಳ್ಳುವುದು ಇಂದಿನ ಶಿಕ್ಷಣದ ಪ್ರಮುಖ ಗುರಿಯಾಗಬೇಕು. ಈ ಹಿನ್ನೆಲೆಯಲ್ಲಿ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯವು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಾಳ್ಕರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Karnataka School Education Minister Madhu Bangarappa announced that Moral Science will be introduced as a subject for students from Classes 1 to 10 starting next academic year. The initiative aims to promote value-based education, environmental awareness, and responsible behavior among students.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

50 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

17 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago