ಪ್ರಸಕ್ತ ಸಾಲಿನಲ್ಲಿ ಎಲೆಕ್ಟ್ರಾನಿಕ್ಸ್ ತಯಾರಿಕಾ ಯೋಜನೆಗಳಿಗೆ ಗುರಿಗಿಂತಲೂ ಎರಡುಪಟ್ಟು ಹೆಚ್ಚು ಬಂಡವಾಳ ಹೂಡಿಕೆ ಹರಿದು ಬಂದಿದ್ದು, ಅಂದಾಜು 1 ಲಕ್ಷದ 41 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ತಯಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇಂದು ಭಾರತವನ್ನು ಜಗತ್ತು ಈ ವಲಯದ ಪ್ರಮುಖ ಉತ್ಪಾದನಾ ಕೇಂದ್ರವಾಗಿ ನೋಡುತ್ತಿದೆ ಎಂದರು. ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಹೂಡಿಕೆ, ತಂತ್ರಜ್ಞಾನ ಬಳಕೆ, ಉತ್ಪಾದನೆ ಹೆಚ್ಚಳ ಮತ್ತು ಉದ್ಯೋಗ ಸೃಷ್ಟಿ, ಈ ನಾಲ್ಕು ಅಂಶಗಳಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…