ಮಹಿಳೆಯರಿಗೆ ತಾಂತ್ರಿಕಾ ಕಾರ್ಯಾಗಾರ | ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆಯಿಂದ ಹೆಚ್ಚು ಲಾಭ

October 17, 2025
6:58 AM

ರೈತ ಮಹಿಳೆಯರು ಬೆಳೆಯುವ ಉತ್ಪನ್ನಗಳನ್ನು ಮೌಲ್ಯವರ್ಧನೆಗೊಳಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ. ಇದೇ ಕಾರಣದಿಂದ ಸಿರಿ ಸಮೃದ್ಧಿ ಎಂಬ ಹೆಸರಿನಲ್ಲಿ ಬ್ರ್ಯಾಂಡಿಂಗ್ ಮಾಡಲಾಗುತ್ತಿದ್ದು, ಈ ಬ್ರ್ಯಾಂಡಿಂಗ್ ನಿಂದ ರೈತರ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ನಂದಿನಿ ಹೇಳಿದರು.

ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನದ ಅಂಗವಾಗಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ತಾಂತ್ರಿಕ ಕಾರ್ಯಾಗಾರವನ್ನು  ಮಂಡ್ಯದಲ್ಲಿ  ಆಯೋಜಿಸಲಾಗಿತ್ತು. ಆಹಾರ ಸಂಸ್ಕರಣಾ ಸಚಿವಾಲಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ, ಮಂಡ್ಯ ಜಿಲ್ಲಾಡಳಿತ, ಹಾಗೂ ಕೃಷಿ ಇಲಾಖೆ ಈ ಕಾರ್ಯಾಗಾರವನ್ನು ಏರ್ಪಡಿಸಿತ್ತು.

ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾಸಾಬ್‌ ಮಾತನಾಡಿ, ಮಹಿಳಾ ಸಹಕಾರ ಸಂಘಗಳಿಗೆ ಮೀನುಗಾರಿಕೆಗಾಗಿ ಕಡಿಮೆ ದರದಲ್ಲಿ ಕೆರೆಗಳನ್ನು ಗುತ್ತಿಗೆ ನೀಡಲಾಗುತ್ತಿದ್ದು, ಮಹಿಳಾ ಸಹಕಾರ ಸಂಘಗಳು ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ಆಹಾರ ಉತ್ಪನ್ನಗಳ ತಯಾರಕರಾದ ಸಾಕಮ್ಮ, ಸಾವಯವ ಬೆಲ್ಲದ ಪಾಯಸ, ಮಿಠಾಯಿ ಸೇರಿ ವಿವಿಧ ರೀತಿಯ ಆಹಾರ ತಯಾರಿಕೆಯಲ್ಲಿ ತೋಡಗಿದ್ದೇವೆ. ನಮ್ಮ ಉತ್ಪನ್ನಗಳಿಗೆ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಬೇಡಿಕೆ ಹೆಚ್ಚಾಗುತ್ತಿದೆ ಎಂದರು.

ಸಭೆಯಲ್ಲಿ  ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಾಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಶಿವಲಿಂಗಯ್ಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror