ರೈತ ಮಹಿಳೆಯರು ಬೆಳೆಯುವ ಉತ್ಪನ್ನಗಳನ್ನು ಮೌಲ್ಯವರ್ಧನೆಗೊಳಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ. ಇದೇ ಕಾರಣದಿಂದ ಸಿರಿ ಸಮೃದ್ಧಿ ಎಂಬ ಹೆಸರಿನಲ್ಲಿ ಬ್ರ್ಯಾಂಡಿಂಗ್ ಮಾಡಲಾಗುತ್ತಿದ್ದು, ಈ ಬ್ರ್ಯಾಂಡಿಂಗ್ ನಿಂದ ರೈತರ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ನಂದಿನಿ ಹೇಳಿದರು.
ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನದ ಅಂಗವಾಗಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ತಾಂತ್ರಿಕ ಕಾರ್ಯಾಗಾರವನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆಹಾರ ಸಂಸ್ಕರಣಾ ಸಚಿವಾಲಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ, ಮಂಡ್ಯ ಜಿಲ್ಲಾಡಳಿತ, ಹಾಗೂ ಕೃಷಿ ಇಲಾಖೆ ಈ ಕಾರ್ಯಾಗಾರವನ್ನು ಏರ್ಪಡಿಸಿತ್ತು.
ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾಸಾಬ್ ಮಾತನಾಡಿ, ಮಹಿಳಾ ಸಹಕಾರ ಸಂಘಗಳಿಗೆ ಮೀನುಗಾರಿಕೆಗಾಗಿ ಕಡಿಮೆ ದರದಲ್ಲಿ ಕೆರೆಗಳನ್ನು ಗುತ್ತಿಗೆ ನೀಡಲಾಗುತ್ತಿದ್ದು, ಮಹಿಳಾ ಸಹಕಾರ ಸಂಘಗಳು ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಆಹಾರ ಉತ್ಪನ್ನಗಳ ತಯಾರಕರಾದ ಸಾಕಮ್ಮ, ಸಾವಯವ ಬೆಲ್ಲದ ಪಾಯಸ, ಮಿಠಾಯಿ ಸೇರಿ ವಿವಿಧ ರೀತಿಯ ಆಹಾರ ತಯಾರಿಕೆಯಲ್ಲಿ ತೋಡಗಿದ್ದೇವೆ. ನಮ್ಮ ಉತ್ಪನ್ನಗಳಿಗೆ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಬೇಡಿಕೆ ಹೆಚ್ಚಾಗುತ್ತಿದೆ ಎಂದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಾಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಶಿವಲಿಂಗಯ್ಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…