Advertisement
ವೆದರ್ ಮಿರರ್

ಹವಾಮಾನ ವರದಿ | 13-11-2025 | ನ.16 ರಿಂದ ಮತ್ತೆ ಮಳೆ ಸಾಧ್ಯತೆ

Share

14.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕರಾವಳಿ ತೀರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.  ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 14 ರಿಂದ ಮಳೆ ಕಡಿಮೆಯಾದರೂ 16 ಅಥವಾ 17 ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಲೆನಾಡು ಭಾಗಗಳಲ್ಲಿ ನಾಳೆಯಿಂದ ಮಳೆ ಕಡಿಮೆಯಾದರೂ ನವೆಂಬರ್ 16 ಅಥವಾ 17 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಮತ್ತು ಕೋಲಾರ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 17 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಬಲಗೊಂಡಿದ್ದು, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾತ್ರ ಮಳೆಯಾಗುವ ಲಕ್ಷಣಗಳಿವೆ.  ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

11 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

12 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

22 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

22 hours ago