ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

September 12, 2023
1:53 PM
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ.

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror