Advertisement
MIRROR FOCUS

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

Share

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

6 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago